ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ಇದೇ ಬರುವ 16 ನೇ ತಾರೀಕು ಸೋಮವಾರ ನವರಾತ್ರಿ ಶುಭ ಸಂದರ್ಭದಲ್ಲಿ ಸಂಜೆ 4 ಗಂಟೆಗೆ ತೆಂಕುತಿಟ್ಟು ಯಕ್ಷ ಮಾರ್ಗ- 2 ಉದ್ಘಾಟನೆ ಹಾಗೂ ತೆಂಕುತಿಟ್ಟು ಹಿಮ್ಮೇಳ ತರಗತಿ ಆರಂಭವಾಗಲಿದೆ.
ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಂದ ತೆಂಕುತಿಟ್ಟು ಯಕ್ಷಮಾರ್ಗ ಒಂದು ಕಾರ್ಯಕ್ರಮ ಕಳೆದ ತಿಂಗಳು ನಡೆದಿರುತ್ತದೆ. ತೆಂಕುತಿಟ್ಟು ಶಾಸ್ತ್ರಿಯ ನಾಟ್ಯದ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ -ಸಂವಾದಗಳು ನಡೆಯಲಿದೆ. ದಾಖಲೀಕರಣಗಳು ಸಂಪೂರ್ಣ ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಯನ ಕೇಂದ್ರದಲ್ಲಿ ಶಾಶ್ವತವಾಗಿರುತ್ತದೆ.
ಮುಂದಿನ ದಿನಗಳಲ್ಲಿ ನಾಟ್ಯ ಅಭ್ಯಾಸದ ಕುರಿತು ಅಧ್ಯಯನ ನಡೆಸುವಲ್ಲಿ ಈ ದಾಖಲಿಕರಣಗಳು ಉಪಯುಕ್ತವಾಗಲಿದೆ. ಅದೇ ದಿನ ಮಾಂಬಾಡಿ ಗುರುಗಳ ಸಲಹೆಯಂತೆ ಕುದುರೆ ಕೂಡ್ಲು ರಾಮಮೂರ್ತಿ ಇವರಿಂದ ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ತರಗತಿಯು ಆರಂಭವಾಗಲಿದೆ.
ಈ ಕಾರ್ಯಕ್ರಮವನ್ನು ನಾಡಿನ ಗೌರವಾನ್ವಿತ ಉದ್ಯಮಿಗಳಾದ, ಕಲಾಪೋಷಕರು,ಧಾರ್ಮಿಕ ಮುಖಂಡರಾದ ಶ್ರೀ ಕೆ. ಕೆ. ಶೆಟ್ಟಿ ಅಹಮದ್ ನಗರ, ಮಹಾರಾಷ್ಟ್ರ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳಾದ ಶ್ರೀ ಶಿವರಾಮ ಭಟ್ ಕಾರಿಂಜೆ ಹಳೆಮನೆ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

