.
ಉಡುಪಿ : ಯಕ್ಷಗಾನ ಹಾಗೂ ತಾಳಮದ್ದಲೆಯ ಪಾರಂಪರಿಕ ಸೊಬಗಿನ ಉಳಿವು ಬೆಳವಣ ಗೆಗಾಗಿ ಕಳೆದ 25 ವರ್ಷಗಳಿಂದ ಶ್ರಮಿಸುತ್ತಿರುವ ಶಿರಸಿಯ ಯಕ್ಷಶಾಲ್ಮಲ ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಗೌರವಾಧ್ಯಕ್ಷತೆಯಲ್ಲಿ ಮಠದ ಆಶ್ರಯದಲ್ಲಿ ಯಕ್ಷಗಾನದ ಏಳ್ಗೆಗಾಗಿ ನಿರಂತರ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಗೆ ಹೊಸ್ತೋಟ ಮಂಜುನಾಥ ಭಾಗವತ ಮತ್ತು ಪ್ರೊ. ಎಂ. ಎ. ಹೆಗಡೆಯವರ ಮಾರ್ಗದರ್ಶನವು ಪ್ರಾಪ್ತಿಯಾಗಿತ್ತು.
50,000/- ರೂಪಾಯಿ ನಗದು ಪುರಸ್ಕಾರಗಳನ್ನೊಳಗೊಂಡ ಪ್ರಶಸ್ತಿಯನ್ನು ನವೆಂಬರ್ 18, 2023 ಶನಿವಾರದಂದು ಶ್ರೀಕ್ಷೇತ್ರ ಕಟೀಲಿನಲ್ಲಿ ನಡೆಯುವ ಸಮಾರಂಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯಸಾನಿಧ್ಯದಲ್ಲಿ ಪ್ರದಾನಮಾಡಲಾಗುವುದೆಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು
- ಸತ್ಸಂಗದ ಕೊನೆಗೆ ನಿರ್ಗಮನ ವೇಳೆಯಲ್ಲಿ ಕಾಲ್ತುಳಿತದಲ್ಲಿ 116 ಮಂದಿ ಸಾವು – ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ಘಟನೆ