.
ಉಡುಪಿ : ಯಕ್ಷಗಾನ ಹಾಗೂ ತಾಳಮದ್ದಲೆಯ ಪಾರಂಪರಿಕ ಸೊಬಗಿನ ಉಳಿವು ಬೆಳವಣ ಗೆಗಾಗಿ ಕಳೆದ 25 ವರ್ಷಗಳಿಂದ ಶ್ರಮಿಸುತ್ತಿರುವ ಶಿರಸಿಯ ಯಕ್ಷಶಾಲ್ಮಲ ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಗೌರವಾಧ್ಯಕ್ಷತೆಯಲ್ಲಿ ಮಠದ ಆಶ್ರಯದಲ್ಲಿ ಯಕ್ಷಗಾನದ ಏಳ್ಗೆಗಾಗಿ ನಿರಂತರ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಗೆ ಹೊಸ್ತೋಟ ಮಂಜುನಾಥ ಭಾಗವತ ಮತ್ತು ಪ್ರೊ. ಎಂ. ಎ. ಹೆಗಡೆಯವರ ಮಾರ್ಗದರ್ಶನವು ಪ್ರಾಪ್ತಿಯಾಗಿತ್ತು.
50,000/- ರೂಪಾಯಿ ನಗದು ಪುರಸ್ಕಾರಗಳನ್ನೊಳಗೊಂಡ ಪ್ರಶಸ್ತಿಯನ್ನು ನವೆಂಬರ್ 18, 2023 ಶನಿವಾರದಂದು ಶ್ರೀಕ್ಷೇತ್ರ ಕಟೀಲಿನಲ್ಲಿ ನಡೆಯುವ ಸಮಾರಂಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯಸಾನಿಧ್ಯದಲ್ಲಿ ಪ್ರದಾನಮಾಡಲಾಗುವುದೆಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
