.
ಉಡುಪಿ : ಯಕ್ಷಗಾನ ಹಾಗೂ ತಾಳಮದ್ದಲೆಯ ಪಾರಂಪರಿಕ ಸೊಬಗಿನ ಉಳಿವು ಬೆಳವಣ ಗೆಗಾಗಿ ಕಳೆದ 25 ವರ್ಷಗಳಿಂದ ಶ್ರಮಿಸುತ್ತಿರುವ ಶಿರಸಿಯ ಯಕ್ಷಶಾಲ್ಮಲ ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಗೌರವಾಧ್ಯಕ್ಷತೆಯಲ್ಲಿ ಮಠದ ಆಶ್ರಯದಲ್ಲಿ ಯಕ್ಷಗಾನದ ಏಳ್ಗೆಗಾಗಿ ನಿರಂತರ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಗೆ ಹೊಸ್ತೋಟ ಮಂಜುನಾಥ ಭಾಗವತ ಮತ್ತು ಪ್ರೊ. ಎಂ. ಎ. ಹೆಗಡೆಯವರ ಮಾರ್ಗದರ್ಶನವು ಪ್ರಾಪ್ತಿಯಾಗಿತ್ತು.
50,000/- ರೂಪಾಯಿ ನಗದು ಪುರಸ್ಕಾರಗಳನ್ನೊಳಗೊಂಡ ಪ್ರಶಸ್ತಿಯನ್ನು ನವೆಂಬರ್ 18, 2023 ಶನಿವಾರದಂದು ಶ್ರೀಕ್ಷೇತ್ರ ಕಟೀಲಿನಲ್ಲಿ ನಡೆಯುವ ಸಮಾರಂಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯಸಾನಿಧ್ಯದಲ್ಲಿ ಪ್ರದಾನಮಾಡಲಾಗುವುದೆಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
