ಪತ್ರಿಕೋದ್ಯಮ ಶಿಕ್ಷಣ ಅಂದ್ರೇನೆ ವಿಭಿನ್ನ, ಇಲ್ಲಿ ಪ್ರಾಯೋಗಿಕವಾಗಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಟಿವಿ9 ವೆಬ್ಸೈಟ್ ನ ಉಪ ಸಂಪಾದಕ ರಾಕೇಶ್ ನಾಯಕ್ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣ ಜ್ಯ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ನಡೆದ ಮೊದಲ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಾಧ್ಯಮ ಲೋಕದಲ್ಲಿ ಹಲವಾರು ಅವಕಾಶಗಳಿವೆ, ಅದರಲ್ಲಿಯೂ ಮುದ್ರಣ ಮಾಧ್ಯಮದಲ್ಲಿ ಸಾಕಷ್ಟು ಸಾಧ್ಯತೆಗಳಿವೆ. ಜೋತೆಗೆ ಅನೇಕ ಪ್ರಚಲಿತ ಸುದ್ದಿಗಳಿಗೆ ಗಮನ ಹರಿಸುವುದು ಮುಖ್ಯ. ವೃತ್ತಿ ಜೀವನ ಇಲ್ಲಿ ಆರಂಭಿಸಿದರೆ ನಮ್ಮ ಬರವಣ ಗೆ, ಆಲೋಚನಾ ಶಕ್ತಿ ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಬಹುದು ಎಂದು ತಿಳಿಸುವುದರ ಜೊತೆಗೆ ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀಪ್ರಿಯ ಪಿ, ಸುತನ್ ಕೇವಳ ಉಪಸ್ಥಿತರಿದ್ದರು.
ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ನೀತ ರವೀಂದ್ರ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

