ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್: ವಿದ್ಯಾಭಾರತಿ ಕರ್ನಾಟಕ:
ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ:
ವಿವೇಕಾನಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಅಭಿಜ್ಞಾ ಶಾಂಭವಿ ಎಸ್.ಜಿ.ಎಫ್.ಐಗೆ ಆಯ್ಕೆ



ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯು ದಿನಾಂಕ ಒಕ್ಟೋಬರ್ 28,29, 30 ರಂದು ಮಧ್ಯಪ್ರದೇಶದ ದೇವಾಸ್ನಲ್ಲಿ ನಡೆಯಿತು. ಈ ಸ್ಪರ್ದೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ:(14ರ ವಯೋಮಾನದ) ಅಭಿಜ್ಞಾ ಶಾಂಭವಿ, 6ನೇ ತರಗತಿ(ಶ್ರೀ ಸುಧೀರ್ ಮತ್ತು ಶ್ರೀಮತಿ ಲತಾ ದಂಪತಿ ಪುತ್ರಿ) –ಪ್ರಥಮ ಸ್ಥಾನ ದೊಂದಿಗೆ ಚಿನ್ನ ಪದಕ, ಮಹತಿ, 6ನೇ ತರಗತಿ(ಶ್ರೀ ಶಿವರಂಜನ್.ಎಂ ಮತ್ತು ಶ್ರೀಮತಿ ಲಾವಣ್ಯ ಭಟ್ ದಂಪತಿ ಪುತ್ರಿ)- ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾಳೆ.
ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ.ಎಂ.ಭಟ್, 10ನೇ ತರಗತಿ(ಶ್ರೀ ರವಿನಾರಾಯಣ.ಎಂ ಮತ್ತು ಶ್ರೀಮತಿ ಶರಾವತಿ ದಂಪತಿ ಪುತ್ರ) – ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾನೆ.
ಪ್ರಥಮ ಸ್ಥಾನ ಪಡೆದ ಅಭಿಜ್ಞಾ ಶಾಂಭವಿ ಎಸ್.ಜಿ.ಎಫ್.ಐ ಗೆ ಆಯ್ಕೆಯಾಗಿರುತ್ತಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

