ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಸುಳ್ಯದ ಹಿರಿಯರ ಕ್ರೀಡಾ ಸಂಘದ ನೇತೃತ್ವದಲ್ಲಿ ಪಂಜದ ಶ್ರೀ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ, ಕಡಬ ಹಾಗೂ ಪುತ್ತೂರು ತಾಲೂಕು 10ನೇಹಿರಿಯರ ಕ್ರೀಡಾಕೂಟದಲ್ಲಿ
ದರ್ಬೆತ್ತಡ್ಕದ ಶ್ರೀ ವೆಂಕಟೇಶ್ ಪ್ರಸಾದ್ ಇವರು ಉದ್ದ ಜಿಗಿತ, ಜಾವೆಲಿನ್ ಮತ್ತು ಡಿಸ್ಕಸ್ ತ್ರೋಗಳಲ್ಲಿ ದ್ವಿತೀಯ ಸ್ಥಾನ ಪಡೆದು ಜನವರಿ 13 ಮತ್ತು 14ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯುವಂತೆ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕ್ರತ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.