ಅಪ್ರಾಪ್ತ ಬಾಲಕನ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಪ್ಪುರಂನಲ್ಲಿ ಇಸ್ಲಾಂ ಧರ್ಮ ಪ್ರಚಾರಕನೊಬ್ಬನನ್ನು ವಜಿಕಡವು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಾಲಕನು ಉಸ್ತಾದ್ನಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬಹಿರಂಗ ಪಡಿಸಿದ್ದಾನೆ. ಮಲಪ್ಪುರಂ ವಜಿಕ್ಕಡವು ಎಂಬಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯದ ಹಿಂದೆ ಉಸ್ತಾದ್ ಇದ್ದುದರಿಂದ ಈ ಬಗ್ಗೆ ಯಾರೊಂದಿಗೂ ಮಾತನಾಡಲು ಭಯವಾಗುತ್ತಿದೆ ಎಂದು ಬಾಲಕ ಶಿಕ್ಷಕರಿಗೆ ತಿಳಿಸಿದ್ದಾನೆ
ಮಂಪಾಡ್ ಪುಲಿಕ್ಕುನ್ನು ವಡಕ್ಕೆ ಚೋಳಕತ್ ಮೂಲದ ಪುತ್ತುಕ್ಕಡವು ಮುಹಮ್ಮದ್ ಶಾಕಿರ್ ಎಂಬಾತ ಬಾಲಕನನ್ನು ಒಂದು ವರ್ಷದಿಂದ ದೌರ್ಜನ್ಯ ಎಸಗಿದ್ದಾನೆ.
“ಶಕೀರ್ ವಿರುದ್ಧ ಮಂಗಳವಾರ ದೂರು ಸ್ವೀಕರಿಸಿದ್ದೇವೆ. ಶಾಕಿರ್ ನಿಂದ ಆದ ದೌರ್ಜನ್ಯದ ಬಗ್ಗೆ ಬಾಲಕ ತನ್ನ ಶಿಕ್ಷಕರಿಗೆ ತಿಳಿಸಿದ್ದಾನೆ. ನಾವು ಯಾವುದೇ ಸಮಯವನ್ನು ವ್ಯರ್ಥ ಮಾಡಲಿಲ್ಲ ಮತ್ತು ಅವನ ಮನೆಯಿಂದ ಅವನನ್ನು ಹಿಡಿದೆವು ”ಎಂದು ವಾಜಿಕಡವು ಪೊಲೀಸ್ ಠಾಣೆಯ ಅಧಿಕಾರಿ ಮನೋಜ್ ಪರಯಟ್ಟ ಹೇಳಿದರು.
ಪೊಲೀಸರ ಪ್ರಕಾರ, ಶಕೀರ್ ಬಾಲಕನನ್ನು ಹಲವಾರು ಬಾರಿ ದೌರ್ಜನ್ಯ ಎಸಗಿದ್ದಾನೆ ಮತ್ತು ಘಟನೆಗಳನ್ನು ಮುಚ್ಚಿಡುವಂತೆ ಬೆದರಿಕೆ ಹಾಕಿದ್ದಾನೆ. ಆರೋಪಿ ಈ ಹಿಂದೆಯೂ ಇದೇ ರೀತಿಯ ಅಪರಾಧದಲ್ಲಿ ಭಾಗಿಯಾಗಿದ್ದನೇ ಎಂಬ ಬಗ್ಗೆ ತನಿಖೆ ನಡೆಸಲು ತನಿಖಾ ತಂಡ ನಿರ್ಧರಿಸಿದೆ.
ಮುಹಮ್ಮದ್ ಶಾಕಿರ್ ಬಾಖವಿ ಮದ್ರಸಾ ಶಿಕ್ಷಕ ಮತ್ತು ಪ್ರಸಿದ್ಧ ಧಾರ್ಮಿಕ ಪ್ರಚಾರಕ. ಅವನು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾನೆ. ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಯುವಕರು ದಾರಿತಪ್ಪಿ, ಗಂಡನಿಗೆ ಮೋಸ ಮಾಡುವ ಹೆಂಡತಿಯರಿಗೆ ಶಿಕ್ಷೆಯಂತಹ ವಿಷಯಗಳ ಕುರಿತು ಉಪದೇಶ ನೀಡಿದ್ದಾನೆ.
ಘಟನೆ ಬೆಳಕಿಗೆ ಬಂದ ನಂತರ ಆರೋಪಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು.
ಮುಹಮ್ಮದ್ ಶಾಕಿರ್ ನನ್ನು ಮಂಜೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿವರವಾದ ವಿಚಾರಣೆಗಾಗಿ ಆತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

