ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇದರ ಸಾಂಸ್ಕೃತಿಕ ಭವನದ ಲೋಕಾರ್ಪಣೆಯ ಕಾರ್ಯಕ್ರಮ ಡಿಸೆಂಬರ್ 26ರಂದು ಮಂಗಳೂರು ಮದ್ಯಾಹ್ನ ಜರಗಲಿದೆ.
ಪೂಜ್ಯ ಖಾವಂದರಾದ ರಾಜರ್ಷಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಾಂಸ್ಕೃತಿಕ ಭವನವನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ.
ಈ ಕಾರ್ಯಕ್ರಮದ ಪ್ರಯುಕ್ತ ಇಂದು ಜರಗಿದ ಪೂರ್ವಭಾವಿ ಸಭೆಯಲ್ಲಿ ಅನೇಕ ಗಣ್ಯರು ಬಂದು ಸಲಹೆ ಸೂಚನೆ ಇತ್ತರು. ಪ್ರಸ್ತುತ ಸಭೆಯಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.
ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಸಿರಿಬಾಗಿಲು ರಾಮಕೃಷ್ಣ ಮಯ್ಯರು ಎಲ್ಲರೂ ಕಾರ್ಯಕ್ರಮದ ಸಂದರ್ಭದಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು. ಊರ ಪರವೂರ ಗಣ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


