ಬಾಲ್ಯದಿಂದಲೇ ಕ್ರೀಡಾ ಮನೋಭಾವ ಮೂಡಿಸಿಕೊಂಡು ಸದೃಢ ಶರೀರ ಬೆಳೆಸಿಕೊಳ್ಳುವುದು ಮಗುವಿನ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ. ಜೆ. ಶೆಟ್ಟಿ ಹೇಳಿದರು.
ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕ್ರೀಡೋತ್ಸವ-2023-24 ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂತಹ ಚಟುವಟಿಕೆಗಳಿಂದ ಮಗುವಿನ ನೈಜ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್. ಎಂ ಹಾಗೂ ಸದಸ್ಯರಾದ ಶ್ರೀಮತಿ ಮಾಲಾ ಮಹೇಶ್ ಶುಭ ಹಾರೈಸಿದರು.
ಸಹಶಿಕ್ಷಕಿ ಶ್ರೀಮತಿ ವಿದ್ಯಾ ಸರಸ್ವತಿ ಸ್ವಾಗತಿಸಿ, ಶ್ರೀಮತಿ ಕವಿತಾ ಸತೀಶ್ ವಂದಿಸಿದರು. ಶ್ರೀಮತಿ ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಮುಖ್ಯೋಪಾಧ್ಯಾಯರುಗಳ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಹಶಿಕ್ಷಕರ ಸಹಕಾರದಲ್ಲಿ ಪೂರ್ವ ಪ್ರಾಥಮಿಕದಿಂದ 4ನೇ ತರಗತಿವರೆಗಿನ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಸಿ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಾಲಾ ಆಡಳಿತ ಮಂಡಳಿ ಸದಸ್ಯರು ಮತ್ತು ಪೋಷಕ ಬಂಧುಗಳು ಉಪಸ್ಥಿತರಿದ್ದರು.
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು