ನಾಳೆ (ಡಿಸೆಂಬರ್ 9) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪವಿತ್ರವಾದ ಮತ್ತು ಸರ್ವರೋಗ ನಿವಾರಕ ಎಂದು ನಂಬಲಾದ ‘ಮೂಲಮೃತ್ತಿಕಾ ಪ್ರಸಾದ’ ತೆಗೆಯುವ ಮತ್ತು ವಿತರಿಸುವ ಕಾರ್ಯಕ್ರಮ ನಡೆಯಲಿದೆ. ಆನಂತರ ಭಕ್ತಾದಿಗಳಿಗೆ ಮೂಲಮೃತ್ತಿಕಾ ಪ್ರಸಾದ ವಿತರಣೆಯೂ ನಡೆಯಲಿದೆ.
ಡಿಸೆಂಬರ್ 9ರ ಶನಿವಾರ ‘ಮೂಲಮೃತ್ತಿಕಾ ಪ್ರಸಾದ’ ತೆಗೆಯುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ನಾಳೆ ಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುವುದು. ದೇವಸ್ಥಾನದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಪುಣ್ಯಕಾರ್ಯಕ್ರಮ ಇರುವುದರಿಂದ ಆ ದಿನ ಅಂದರೆ ನಾಳೆ ಬೆಳಗ್ಗಿನಿಂದ ಮಧ್ಯಾಹ್ನ 2 ಘಂಟೆಯವರೆಗೆ ದೇವರ ದರ್ಶನ ಮತ್ತು ಇತರ ಸೇವೆಗಳಿಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಅತ್ಯಂತ ಪುರಾತನವಾದ ಕುಕ್ಕೆ ಸನ್ನಿಧಿಯಲ್ಲಿ ಈ ಪ್ರಸಾದವನ್ನು ವರ್ಷಕ್ಕೊಂದು ಬಾರಿ ಮಾತ್ರ ತೆಗೆಯಲಾಗುವುದು. ಅದೂ ಈ ಜಾತ್ರಾ ಸಮಯದಲ್ಲಿ ಮಾತ್ರ.
‘ಮೂಲಮೃತ್ತಿಕಾ ಪ್ರಸಾದ’ಕ್ಕೆ ಅತ್ಯಂತ ವಿಶೇಷತೆ ಹಾಗೂ ಮಹತ್ವವಿದೆ. ‘ಮೂಲಮೃತ್ತಿಕಾ ಪ್ರಸಾದ’ ಎಂದರೆ ನಾಗದೇವರ ಹುತ್ತದಿಂದ ತೆಗೆಯುವ ಮಣ್ಣು. ಮೃತ್ತಿಕಾ ಎಂದರೆ ಭೂಮಿತಾಯಿ, ಭೂಮಿ ಅಥವಾ ಮಣ್ಣು ಎಂದರ್ಥ. ಹುತ್ತದಿಂದ ತೆಗೆಯುವ ಮಣ್ಣು ಆದ್ದರಿಂದ ಈ ಹೆಸರು ಬಂದಿದೆ.
ಇದು ಅತ್ಯಂತ ಪಾವಿತ್ರ್ಯತೆಯನ್ನು ಹೊಂದಿದ ನಾಗದೇವರ ಪ್ರಸಾದವಾಗಿರುತ್ತದೆ. ಈ ಪ್ರಸಾದವು ಹಲವು ರೋಗಗಳನ್ನು ಗುಣಪಡಿಸುವ ಔಷಧೀಯ ಗುಣವುಳ್ಳ ಹುತ್ತದ ಪ್ರಸಾದ. ಸಂತಾನಹೀನತೆ, ಚರ್ಮರೋಗ ಮೊದಲಾದ ಹಲವು ವ್ಯಾಧಿಗಳಿಗೆ ಈ ಪ್ರಸಾದವು ಒಂದು ದಿವ್ಯ ಔಷಧಿಯಾಗಿ ಪರಿಣಮಿಸುತ್ತದೆ ಎಂದು ಶ್ರೀ ಕ್ಷೇತ್ರದ ಅಸಂಖ್ಯ ಭಕ್ತರ ನಂಬಿಕೆ ಮತ್ತು ಅನಿಸಿಕೆಯಾಗಿದೆ. ಈ ಮೂಲಪ್ರಸಾದವನ್ನು ಲಕ್ಷಾಂತರ ಜನರು ಸ್ವೀಕರಿಸಿ, ಸೇವಿಸಿ ಅದರಿಂದ ಹಲವಾರು ರೋಗಗಳಿಗೆ ಪರಿಹಾರವನ್ನು ಕಂಡುಕೊಂಡಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

