ನವದೆಹಲಿ: ದೇಶದಲ್ಲಿ ಜೆಎನ್ 1 ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಕೇಂದ್ರ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಒತ್ತಾಯಿಸಿದೆ.
ಕೇರಳ ರಾಜ್ಯದಲ್ಲಿ 300 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 358 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ನಿಂದ ಮೂವರು ಸಾವನ್ನಪ್ಪಿದ್ದಾರೆ.
ಇದರೊಂದಿಗೆ ಸಾರ್ವಕಾಲಿಕ ಒಟ್ಟು ಸಾವಿನ ಸಂಖ್ಯೆ 5,33,327 ಕ್ಕೆ ತಲುಪಿದೆ. 4,44,70,576 ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ, ಚೇತರಿಕೆಯ ಪ್ರಮಾಣವು 98.81 ಆಗಿದೆ. ಹೆಚ್ಚಿನ ಹೊಸ ಪ್ರಕರಣಗಳು ಕೇರಳ, ಕರ್ನಾಟಕ, ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರದಿಂದ ವರದಿಯಾಗಿವೆ.
ಹೆಚ್ಚುತ್ತಿರುವ ಕೋವಿಡ್ ರೋಗಿಗಳ ಸಂಖ್ಯೆ ಮತ್ತು ಸಾವಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಆರೋಗ್ಯ ಸಚಿವಾಲಯವು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವ್ಯ ಅವರ ಅಧ್ಯಕ್ಷತೆಯಲ್ಲಿ ಮರುದಿನ ಪರಿಶೀಲನಾ ಸಭೆಯನ್ನು ನಡೆಸಿತು. ಎಚ್ಚರಿಕೆ ವಹಿಸುವುದು ಮುಖ್ಯ ಎಂದು ಸಭೆ ಅಭಿಪ್ರಾಯಪಟ್ಟಿದೆ.
ರೋಗ ತಡೆಗೆ ಕೇಂದ್ರ ಮತ್ತು ರಾಜ್ಯಗಳು ಜಂಟಿಯಾಗಿ ಪ್ರಯತ್ನ ನಡೆಸಬೇಕು, ರೋಗ ಲಕ್ಷಣ ಕಂಡು ಬಂದವರ ಮೇಲೆ ನಿಗಾ ಇಡಬೇಕು ಹಾಗೂ ಕಾಯಿಲೆಯಿಂದ ಗಂಭೀರವಾಗಿ ಪೀಡಿತರಾದವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

