Friday, September 20, 2024
Homeಸುದ್ದಿಸರ್ಪಸಂಸ್ಕಾರ ಪೂಜಾ ಸೇವೆ - ಇಂದು ಜಾತ್ರಾ ಮಹೋತ್ಸವದ ಕೊನೆಯ ದಿನ - ಇತಿಹಾಸ ಪ್ರಸಿದ್ಧ...

ಸರ್ಪಸಂಸ್ಕಾರ ಪೂಜಾ ಸೇವೆ – ಇಂದು ಜಾತ್ರಾ ಮಹೋತ್ಸವದ ಕೊನೆಯ ದಿನ – ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಳೆಯಿಂದ (ಡಿಸೆಂಬರ್ 25) ಸರ್ಪಸಂಸ್ಕಾರ ಸೇವೆ ಪುನರಾರಂಭ 

ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಳೆಯಿಂದ (ಡಿಸೆಂಬರ್ 25) ಸರ್ಪಸಂಸ್ಕಾರ ಸೇವೆ ಪುನರಾರಂಭವಾಗಲಿದೆ. 

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 10-12-2023ರಿಂದ ನಡೆಯುತ್ತಿದ್ದು ಅದು ಇಂದು 24-12-2023ರಂದು ಸಮಾಪ್ತಿಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಆ ದಿನಗಳಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುವುದಿಲ್ಲ. 

ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ದ್ವಾದಶಿಯ ದಿನವಾದ ಆದಿತ್ಯವಾರ 10-12-2023ರಿಂದ 24-12-2023ರ ದ್ವಾದಶಿಯ ವರೆಗೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಇಂದು ಜಾತ್ರಾ ಮಹೋತ್ಸವದ ಕೊನೆಯ ದಿನವಾಗಿದೆ.

ಆದುದರಿಂದ ನಾಳೆಯಿಂದ ಎಂದಿನಂತೆ ದೇವಸ್ಥಾನದ ಎಲ್ಲಾ ಸೇವೆಗಳನ್ನು ನಡೆಸುವ ಅವಕಾಶ ಭಕ್ತಾದಿಗಳಿಗೆ ಲಭ್ಯವಾಗಲಿವೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments