ಇಂದು ಪುತ್ತೂರು ತಾಲೂಕು ಮಾಡಾವು ಅಯ್ಯಪ್ಪ ಭಜನಾ ಮಂದಿರದಲ್ಲಿ ಸತತ 11ನೇ ವರ್ಷದ, ಕಟೀಲು ಮೇಳದವರ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಇಂದು ಅಂದರೆ ಮಕರ ಸಂಕ್ರಾಂತಿಯ ಪ್ರಯುಕ್ತ ದಿನಾಂಕ 14.01.2024ನೇ ಆದಿತ್ಯವಾರದಂದು ಸಂಜೆ 6 ಘಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯರಿಂದ ‘ಶ್ರೀದೇವೀ ಲಲಿತೋಪಾಖ್ಯಾನ’ ಎಂಬ ಪ್ರಸಂಗದ ಪ್ರದರ್ಶನ ನಡೆಯಲಿದೆ.
ಅದಕ್ಕೂ ಮೊದಲು ಅಂದರೆ ಸಂಜೆ 4 ಘಂಟೆಯಿಂದ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ಘಂಟೆಗೆ ಸರಿಯಾಗಿ ಅನ್ನಸಂತರ್ಪಣೆ ನಡೆಯಲಿದೆ.
ಈ ಬಾರಿಯ ಅನ್ನಸಂತರ್ಪಣೆಯ ಪ್ರಾಯೋಜಕತ್ವವನ್ನು ವಹಿಸಿಕೊಂಡವರು ಶ್ರೀ ವೆಂಕಟೇಶ್ವರ ಅರೆಪ್ಪಳ ಮತ್ತು ಅಜಯ್ ಕೃಷ್ಣ ಅರೆಪ್ಪಳ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಂಘಟಕರು ಸರ್ವರನ್ನೂ ಆದರದಿಂದ ಸ್ವಾಗತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ
- ಮಂಜೇಶ್ವರದ ಕುಂಜತ್ತೂರಿನಲ್ಲಿ ಆಂಬ್ಯುಲೆನ್ಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ