ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನಿಹ ಇರುವ ಶ್ರೀ ಅಯ್ಯಪ್ಪ ಗುಡಿಯಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಎಡಕ್ಕಾನ ಗಣಪತಿ ಭಟ್ (79) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಅವರು ಕೆಲವು ದಿನಗಳ ಹಿಂದೆ ವಯೋಸಹಜ ಅನಾರೋಗ್ಯದಿಂದಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಅವರು ನಿನ್ನೆ (13.01.2024) ಕೊನೆಯುಸಿರೆಳೆದರು.
ಈ ಮೊದಲು ವಿದೇಶದಲ್ಲಿ (ಕುವೈತ್) ಉದ್ಯೋಗಲ್ಲಿದ್ದು ಆ ಮೇಲೆ ಸ್ವದೇಶಕ್ಕೆ ಮರಳಿದ್ದರು. ಅಪ್ಪಟ ಯಕ್ಷಗಾನ ಪ್ರೇಮಿಯಾಗಿದ್ದ ಅವರು ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ದಿ| ನಯನಕುಮಾರ್ ಅವರ ಹಿರಿಯ ಸಹೋದರ.
ಅರ್ಚಕ ವೃತ್ತಿಯನ್ನು ಬಲ್ಲವರಾಗಿದ್ದ ಎಡಕ್ಕಾನ ಗಣಪತಿ ಭಟ್ಟರು ಕೆಲವು ವರ್ಷಗಳಿಂದ ಪುತ್ತೂರಿನ ಅಯ್ಯಪ್ಪ ಗುಡಿಯಲ್ಲಿ ಅರ್ಚಕರಾಗಿ ದೇವರ ಸೇವೆಯನ್ನು ಮಾಡುತ್ತಿದ್ದರು.
ಅವರು ಪತ್ನಿ ಲಕ್ಷ್ಮಿ ಭಟ್, ಪುತ್ರ ಶ್ರೀ ರಾಜಾರಾಮ ಭಟ್, ಪುತ್ರಿಯರಾದ ಶ್ರೀಮತಿ ಸಂಧ್ಯಾ ಭಟ್, ಶ್ರೀಮತಿ ಗೀತಾ ಭಟ್ ಅವರನ್ನು ಅಗಲಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

