ಪ್ರೀತಿಸಿ 8 ತಿಂಗಳ ಹಿಂದೆಯಷ್ಟೇ ಮದುವೆವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಎಂಬಲ್ಲಿ.
ಶಮಿತಾ (24) ಎಂಬವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ಹೋಗಿದ್ದಳು. ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ವಿಷಯ ಗೊತ್ತಾಗಿದೆ.
ಈ ವೇಳೆಯಲ್ಲಿ ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಗಂಡನ ತಂದೆ, ತಾಯಿ ಇದ್ದರು.
ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದೆ, ಅಸೌಖ್ಯತೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.
ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ಮದುವೆವಾಗಿದ್ದರು. ವಿದ್ಯಾರ್ಥ್ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕೆಲಸಮಾಡುತ್ತಿದ್ದರು.
.
ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

