ಕೆರೆಯೊಂದರಲ್ಲಿ ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಎಳೆಯ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ವ್ಯಕ್ತಪಡಿಸಲಾಗಿದೆ.
ಶವಗಳು ತೇಲಾಡುತ್ತಿದ್ದನ್ನು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮೇಲಕ್ಕೆ ತೆಗೆಯಲಾಗಿದ್ದು ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ಪತ್ತೆ ಮಾಡಲಾಗಿದೆ.
ಮಹಿಳೆಯ ಗಂಡ ಮಲ್ಲಿಕಾರ್ಜುನ್ ಮತ್ತು 4 ವರ್ಷದ ಮಗಳು ಪೂರ್ವಿತಾ ಮತ್ತು ಇನ್ನೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿರಲಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬಾಗೇಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.