ಕರ್ನಾಟಕ ಕಲಾದರ್ಶಿನಿಗೆ ನಿಡಂಬೂರು ಬೀಡುಬಲ್ಲಾಳ ಪ್ರಶಸ್ತಿ.
ಅಂಬಲಪಾಡಿ ದೇವಳದ ಧರ್ಮದರ್ಶಿಯಾಗಿ ಕಲೆ, ಸಂಸ್ಕೃತಿಯನ್ನು ವಿಶೇಷವಾಗಿ ಪ್ರೋತ್ಸಾಹಿಸುತ್ತಿದ್ದ ನಿ. ಬೀ. ಅಣ್ಣಾಜಿ ಬಲ್ಲಾಳರ ಹೆಸರಿನಲ್ಲಿ ಅವರ ಸುಪುತ್ರ ಡಾ. ನಿ. ಬೀ. ವಿಜಯ ಬಲ್ಲಾಳರು ಸ್ಥಾಪಿಸಿದ ‘ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿ’ಗೆ
ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಯಕ್ಷಗಾನ ಕಲಿಕೆ, ಪ್ರದರ್ಶನ, ಯಕ್ಷಗಾನ ಸಂಬಂಧೀ ಗೋಷ್ಠಿ, ಕಮ್ಮಟಗಳನ್ನು ನಡೆಸುತ್ತಾ ಕ್ರಿಯಾಶೀಲವಾಗಿರುವ ಕರ್ನಾಟಕ ಕಲಾದರ್ಶಿನಿ ಸಂಸ್ಥೆ ಆಯ್ಕೆಯಾಗಿದೆ.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನೊಳಗೊಂಡಿದೆ.
ಫೆಬ್ರವರಿ 03, 2024 ಶನಿವಾರ ಕಂಬ್ಳಕಟ್ಟದ ಶ್ರೀ ಜನಾರ್ದನ ಮಂಟಪದಲ್ಲಿ ನಡೆಯುವ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ 66ನೇ ವಾರ್ಷಿಕೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಂಸ್ಥೆಯ ಅಧ್ಯಕ್ಷ ಕೆ. ಅಜಿತ್ ಕುಮಾರ್, ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು