ಆಮೇರಿಕದ ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ ಕೆನಡಿ ಸ್ಕೂಲ್ ಗವರ್ನ್ಮೆಂಟ್ನಲ್ಲಿ ನಾಯಕತ್ವ, ಸಂಘಟನೆ ಮತ್ತು ನಾಗರಿಕ ಸಮಾಜದಲ್ಲಿ ರೀಟಾ ಈ ಹೌಸರ್ ಹಿರಿಯ ಉಪನ್ಯಾಸಕ, 16 ವರ್ಷಗಳ ಕಾಲ ಯುನೈಟೆಡ್ ಫಾರ್ಮ್ವರ್ಕಸ್ನಲ್ಲಿ ಕೆಲಸ ಮಾಡಿದ್ದು, ಸಮಾಜ ಶಾಸ್ತçದಲ್ಲಿ ಪಿ.ಎಚ್.ಡಿ. ಪಡೆದ ಮಾರ್ಷಲ್ ಗಂಜ್ ರವರು
23-01-2024ರಂದು ಕಳೆದ 45 ವರ್ಷದಿಂದ ಯಕ್ಷಗಾನ ಪ್ರದರ್ಶನ, ಕಮ್ಮಟ, ತರಬೇತಿ, ಕಾರ್ಯಗಾರ, ವಿಚಾರ ಸಂಕಿರಣ, ಪುಸ್ತಕ ಬಿಡುಗಡೆ ಹೀಗೆ ಗುಣಾತ್ಮಕ ಪ್ರದರ್ಶನ ನೀಡುತ್ತಾ ಬಂದಿರುವ ಕೆ. ಮೋಹನ್ ನಿರ್ದೇಶನದ ಬೆಂಗಳೂರಿನ ತ್ಯಾಗರಾಜ ನಗರದಲ್ಲಿರುವ ಯಕ್ಷದೇಗುಲಕ್ಕೆ ಯಕ್ಷಗಾನದ ಮೂಲ ಸತ್ವ ತಿಳಿದುಕೊಳ್ಳಲು ಡಾ. ಮಾರ್ಷಲ್ ಗಂಜ್ ತಂಡದವರು ಆಗಮಿಸಿದರು.
ಪ್ರಿಯಾಂಕ ಕೆ. ಮೋಹನ ನಿರ್ದೇಶನದಲ್ಲಿ ಸಂಪ್ರದಾಯ ಕೊಡಂಗಿ ನೃತ್ಯ, ಬಾಲಗೋಪಾಲ, ಪೀಠಿಕಾ ಸ್ತ್ರೀ ವೇಷ, ಕೃಷ್ಣನ ಒಡ್ಡೋಲಗ, ರಾಜವೇಷದ ಒಡ್ಡೋಲಗ, ಯುದ್ಧ ನೃತ್ಯ, ಅಭಿನಯ, ಮಾತುಗಾರಿಕೆ ಬಗ್ಗೆ ಎರಡು ಗಂಟೆಗಳ ಕಾಲ ಪ್ರಾತ್ಯಕ್ಷಿಕೆ ಮತ್ತು ಕಂಸವಧೆ ಪ್ರಸಂಗದ ಒಂದು ಭಾಗವನ್ನು ಪ್ರದರ್ಶಿಸಲಾಯಿತು.
ಕನ್ನಡದಲ್ಲಿ ಮಾಡಿದ ಈ ಪ್ರಾತ್ಯಕ್ಷಿಕೆಯ ಎಲ್ಲಾ ಭಾಗವನ್ನು ಆಂಗ್ಲ ಭಾಷಾ ಸಂವಹನದೊಂದಿಗೆ ಪ್ರದರ್ಶಿಸಲಾಯಿತು.
ಪ್ರದರ್ಶನದಲ್ಲಿ ಪ್ರಿಯಾಂಕ ಕೆ. ಮೋಹನ್, ಶ್ರೀ ರಾಮ, ವಿಶ್ವನಾಥ ಉರಾಳ, ಶ್ರೀ ವಿದ್ಯಾ, ಚೈತ್ರ, ಶ್ರೀವತ್ಸ, ತೇಜಸ್ ಇನ್ನೀತರರು ಭಾಗವಹಿಸಿದರು.
ಯಕ್ಷದೇಗುಲದ ನಿರ್ದೇಶಕರಾದ ಕೆ. ಮೋಹನರು ಯಕ್ಷದೇಗುಲದ 45 ವರ್ಷದ ಅನುಭವನ್ನು ಡಾ. ಮಾರ್ಷಲ್ ಗಂಜ್ ತಂಡದವರೊಂದಿಗೆ ಹಂಚಿಕೊಂಡರು.

- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

