ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸು ಹೆಚ್ಚು ಎಂದು ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ರಾಮನಗರ ಎಂಬಲ್ಲಿ ನಡೆದಿದೆ.
ಬಿ.ಬಿ.ಮುಸ್ಕಾನ್ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು.
ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು ಆಕೆಗೆ ವಯಸ್ಸಿನ ಅಂತರ ಹೆಚ್ಚಾದ ಹಿನ್ನೆಲೆಯಲ್ಲಿ ಈ ಮದುವೆಗೆ ಮೊದಲು ಒಪ್ಪಿಕೊಂಡಿರಲಿಲ್ಲ. ನಂತರ ಮನೆಯವರ ಒತ್ತಾಯದಿಂದ ಈ ಮದುವೆಗೆ ಒಪ್ಪಿಕೊಂಡಿದ್ದಳು
ಆದರೆ ಆಗ ಮನೆಯವರ ಬಲವಂತಕ್ಕೆ ಮದುವೆಗೆ ಒಪ್ಪಿಕೊಂಡಿದ್ದವಳು ಈಗ ಮದುವೆಯಲ್ಲಿ ಬೇಸರ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜನವರಿ 24 ರಂದು ರಾತ್ರಿ ಉಟ ಮುಗಿಸಿಕೊಂಡು ಮಲಗಲು ಹೋದ ಯುವತಿ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿದ್ದಾಳೆ. ಈ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮನೆಯವರು ಹಾಗೂ ನಿಶ್ಚಿತಾರ್ಥವಾಗಿದ್ದ ಹುಡುಗನ ಮನೆಯವರನ್ನು ವಿಚಾರಣೆ ನಡೆಸುತ್ತಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

