ಸಿರಿಬಾಗಿಲು ಪ್ರತಿಷ್ಠಾನಕ್ಕೆ ಪಂಜ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಗೌರವ
ಫೆಬ್ರವರಿ 5, ಪಂಜ::ಗಡಿನಾಡು ಕಾಸರಗೋಡಿನ ಶ್ರೇಷ್ಠ ಸಂಸ್ಥೆ ಸಿರಿಬಾಗಿಲು ವೆಂಕಪ್ಷಯ್ಯ ಸಾಂಸ್ಕೃತಿಕ ಪ್ರತಿಷ್ಠಾನಕ್ಕೆ ಸುಳ್ಯ ತಾಲೂಕಿನ ಪಂಜದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಗೌರವಿಸಲಾಯಿತು.
ಗಡಿನಾಡು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನದ ಮೂಲಕ ,ಕನ್ನಡ- ಸಂಸ್ಕೃತಿ- ಸಾಹಿತ್ಯ- ಕಲೆಯ ಸಮಗ್ರ ಅಧ್ಯಯನಕ್ಕೆ ವಿವಿಧ ಅಧ್ಯಯನ ಯೋಗ್ಯ ಚಟುವಟಿಕೆ ನಡೆಸುತ್ತಿರುವ ಪ್ರತಿಷ್ಠಾನವು, ಭವನದಲ್ಲಿ ತೆಂಕುತಿಟ್ಟು ಯಕ್ಷಗಾನ ಮ್ಯೂಸಿಯಂ- ಪುಸ್ತಕ ಭಂಡಾರ- ಪುಸ್ತಕ ಪ್ರಕಾಶ -ಕೀರ್ತಿಶೇಷ ಕಲಾವಿದರ ಭಾವಚಿತ್ರ ಅನಾವರಣ ಉಂಟಾದ ಯೋಜನೆ ಹಮ್ಮಿಕೊಂಡು ಯಶಸ್ವಿಯಾಗಿದೆ.

ಕಳೆದ ಡಿಸೆಂಬರು 26 ರಂದು ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಯವರಿಂದ ಲೋಕಾರ್ಪಣೆಯಾಗಿರುತ್ತದೆ .
ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಡಾಕ್ಟರ್ ಅನಿಲ್ ಕುದುಮಾರುಬೆಟ್ಟು ಅವರು ಪ್ರತಿಷ್ಠಾನಕ್ಕೆ ಗೌರವಫಲಕ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮೇಳದ ಪ್ರಬಂಧಕರಾದ ಶ್ರೀ ಬಿ. ಯನ್. ಗಿರೀಶ ಹೆಗ್ಡೆ ಯವರು ಅಭಿನಂದನಾ ಭಾಷಣ ಮಾಡಿದರು,
ಕಲಾಭಿಮಾನಿಗಳಾದ ಡಾ. ಸತ್ಯನಾರಾಯಣ ಕಾವು, ವಿಜಯ ಭಟ್ ಪಂಜ ಉಪಸ್ಥಿತರಿದ್ದರು. ಶ್ರೀ ಜಯರಾಮ ಕಲ್ಲಂಜೆ ಯವರು ನಿರೂಪಿಸಿದರು..ಭಾಗವಹಿಸಿದ ಸಹಸ್ರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಳಿಕ ಶ್ರೀ ಧರ್ಮಸ್ಥಳ ಮೇಳದ ವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ನಡೆಯಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

