ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ. ಘಟನೆ ನಡೆದದ್ದು ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ.
ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎನ್ನುವ ಪುರುಷನ ಜೊತೆಗೆ ಪ್ರೀತಿ ಬೆಳೆದಿತ್ತು. ಈ ಹಿಂದೆ ಎರಡು ಸಂದರ್ಭದಲ್ಲಿ ಕೃಷ್ಣನ ಜೊತೆಗೆ ಸಂಗೀತಾ ಮನೆಬಿಟ್ಟು ಓಡಿ ಹೋಗಿದ್ದಳು.
ಆಗ ಹೆತ್ತವರು ಮನಃ ಪರಿವರ್ತನೆ ಮಾಡಿ ಮನೆಗೆ ಕರೆತಂದಿದ್ದರು. ಆದರೆ ಇದೀಗ ದುಡುಕಿ ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸೀರೆಯಿಂದ ನೇಣುಬಿಗಿದುಕೊಂಡು ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಡ್ರೈವರ್ ಕೃಷ್ಣನೊಂದಿಗೆ ಅಪ್ರಾಪ್ತ ವಯಸ್ಸಿನ ಆಕೆಗೆ ಇದ್ದ ಪ್ರೀತಿಗೆ ಪೋಷಕರು ವಿರೋಧ ಮಾಡುತ್ತಿದ್ದಾರೆ ಎಂದು ಅವಳು ತಪ್ಪಾಗಿ ತಿಳಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.
ಸಂಗೀತಾ ಮೃತದೇಹವನ್ನು ಮಾನ್ವಿಯಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪ್ರಾಪ್ತ ಹುಡುಗಿಯ ಅತ್ಯಾಚಾರ ಆರೋಪದ ಪ್ರಕರಣ ದಾಖಲಿಸಿದ ಆರೋಪಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

