ನಿನ್ನೆ ದಿನಾಂಕ 08.03.2024 ನೇ ಶುಕ್ರವಾರದಂದು ಪಣಂಬೂರು ಶ್ರೀ ನಂದನೇಶ್ವರ ಕ್ಷೇತ್ರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ (ನಾಲ್ಕನೇ ಮೇಳ) ಯಕ್ಷಗಾನ ಪ್ರದರ್ಶನ ನಡೆಯಿತು.
ಪ್ರದರ್ಶನದಲ್ಲಿ ‘ತ್ರಿಮೂರ್ತಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಕಟೀಲು ಮೇಳದ ಖ್ಯಾತ ಭಾಗವತರಾದ ಶ್ರೀ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಮತ್ತು ಖ್ಯಾತ ಹಾಸ್ಯಗಾರರಾದ ಶ್ರೀ ರವಿಶಂಕರ್ ವಳಕ್ಕುಂಜ ಅವರನ್ನು ಸನ್ಮಾನಿಸಿ ಗೌರವಿಸಿದರು.