ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಮಾರ್ಚ್ 9 ಮತ್ತು 10 ರಂದು ನಡೆದ 2ನೇ ದಕ್ಷಿಣ ಭಾರತ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ
ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ಶ್ರೀ ವೆಂಕಟೇಶ್ ಪ್ರಸಾದ್ (ದಿ.ರಾಮಚಂದ್ರ ಭಟ್ ಮತ್ತು ಶ್ರೀಮತಿ ಸರಸ್ವತಿ ಭಟ್ ದಂಪತಿಗಳ ಪುತ್ರ) ಇವರು 45ರ ವಯೋಮಾನದ 110 ಮೀ ಹರ್ಡಲ್ಸ್ ನಲ್ಲಿ ಪ್ರಥಮ , ಹೈಜಂಪ್, 4×100 ಮೀ ರಿಲೇ ಹಾಗೂ 4×100 ಮೀ ರಿಲೇಗಳಲ್ಲಿ ಚತುರ್ಥ ಸ್ಥಾನ ಗಳಿಸಿದ್ದಾರೆ.
ಇವರು ದರ್ಬೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿರುತ್ತಾರೆ.
ಈ ಕ್ರೀಡಾಕೂಟದಲ್ಲಿ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪಾಂಡಿಚೇರಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ರಾಜ್ಯಗಳ ಸುಮಾರು 770ಕ್ಕೂ ಅಧಿಕ ಹಿರಿಯ ಕ್ರೀಡಾಪಟುಗಳು ಭಾಗವಹಿದ್ದರು..
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

