ಹೈದರಾಬಾದ್/ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನು ಹೈದರಾಬಾದ್ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದು, ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕವಿತಾ ಅವರು ತೆಲಂಗಾಣದಲ್ಲಿ ವಿಧಾನ ಪರಿಷತ್ತಿನ (MLC) ಸದಸ್ಯೆ ಮತ್ತು ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ.
ಕಳೆದ ವರ್ಷ ಈ ಪ್ರಕರಣದಲ್ಲಿ ಆಕೆಯನ್ನು ಪ್ರಶ್ನಿಸಲಾಗಿತ್ತು, ಆದರೆ ಈ ವರ್ಷ ಎರಡು ಸಮನ್ಸ್ಗಳನ್ನು ತಪ್ಪಿಸಿದ್ದರು.
ಬಿಆರ್ಎಸ್ ನಾಯಕಿಗೆ ಬುಧವಾರದವರೆಗೆ ವಿಚಾರಣೆಯಿಂದ ವಿನಾಯಿತಿ ನೀಡಿದ್ದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಏಜೆನ್ಸಿಯ ಸಮನ್ಸ್ ವಿರುದ್ಧ ಆಕೆಯ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಮುಂದಿನ ವಿಚಾರಣೆ ಮಂಗಳವಾರ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

