ಕೊಂಡದಕುಳಿ ಅವರಿಗೆ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ.
ಇಂದು (23.04.2024) ಪಲಿಮಾರಿನಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಪಲಿಮಾರು ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಗುರುಗಳಾದ ಶ್ರೀ ವಿದ್ಯಾಮಾನ್ಯ ಶ್ರೀಪಾದರ ಹೆಸರಿನಲ್ಲಿ ಪ್ರತೀವರ್ಷ ಕೊಡಮಾಡುವ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿಯನ್ನು ಬಡಗುತಿಟ್ಟಿನ ಶ್ರೇಷ್ಠ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ಪ್ರದಾನ ಮಾಡಿದರು.

ಈ ಪ್ರಶಸ್ತಿನ 50,000/- ನಗದು ಪುರಸ್ಕಾರಗಳನ್ನೊಳಗೊಂಡಿದೆ. ಶ್ರೀ ಕಾಣ ಯೂರು, ಶ್ರೀ ಸೋದೆ, ಶ್ರೀ ಭೀಮನಕಟ್ಟೆ ಹಾಗೂ ಪಲಿಮಾರು ಕಿರಿಯ ಶ್ರೀಪಾದಂಗಳವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪಲಿಮಾರು ಶ್ರೀಗಳು ಎರಡು ದಶಕಗಳ ಹಿಂದೆ ಕೊಂಡದಕುಳಿಯವರು ನಿರ್ವಹಿಸಿದ ಹನುಮಂತನ ಪಾತ್ರ ಇಂದಿಗೂ ನನ್ನ ಮನಸ್ಸಿನಲ್ಲಿ ಹಸಿರಾಗಿದೆ. ಇಂತಹ ಶ್ರೇಷ್ಠ ಕಲಾವಿದ ಇನ್ನಷ್ಟು ಸಮಯ ರಂಗದಲ್ಲಿ ಪಾತ್ರನಿರ್ವಹಿಸುವಂತಾಗಲಿ ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.
ಪ್ರಶಸ್ತಿ ಸ್ವೀಕರಿಸಿದ ಕೊಂಡದಕುಳಿಯವರು ಈ ದಿನ ನನ್ನ ಪಾಲಿಗೆ ಸಂತಸದ ಕ್ಷಣ, ಕಲಾವಿದನಾದವನು ಅಧ್ಯಯನಶೀಲನಾಗಿರಬೇಕು. ಕಲಾವಿದರು ತಪಸ್ವಿಗಳು ಎಂದು ಪೇಜಾವರ ವಿಶ್ವೇಶ ತೀರ್ಥರು ಹೇಳಿದ ಮಾತನ್ನು ನೆನಪಿಸಿಕೊಂಡರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದನೆಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕೊಂಡದಕುಳಿಯವರ ಪತ್ನಿ ಚೇತನಾ ಹೆಗಡೆ, ಯಕ್ಷಗಾನ ಕಲಾರಂಗದ ಅದ್ಯಕ್ಷ ಎಂ. ಗಂಗಾಧರ ರಾವ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

