Saturday, May 4, 2024
Homeಸುದ್ದಿಉಡುಪಿ ಪರ್ಯಾಯವೂ, ಮಟ್ಟಿ (ವಾದಿರಾಜ) ಗುಳ್ಳವೂ

ಉಡುಪಿ ಪರ್ಯಾಯವೂ, ಮಟ್ಟಿ (ವಾದಿರಾಜ) ಗುಳ್ಳವೂ

ಯು. ಶ್ರೀಧರ್ ಅವರು ಬರೆದ ‘ಉಡುಪಿ ಪರ್ಯಾಯವೂ, ಮಟ್ಟಿ (ವಾದಿರಾಜ) ಗುಳ್ಳವೂ ಮತ್ತು ಇತರ ಆಯ್ದ ಲೇಖನಗಳು’ ಪುಸ್ತಕ ಎಪ್ರಿಲ್ 21ರಂದು ಲೋಕಾರ್ಪಣೆ ಗೊಂಡಿತು.

ಯಕ್ಷಗಾನ ಕಲಾರಂಗದ ನೂತನ ಕಟ್ಟಡದಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಕೃತಿ ಬಿಡುಗಡೆ ಮಾಡಿ ಯು. ಶ್ರೀಧರರು ಇಳಿ ವಯಸ್ಸಿನಲ್ಲೂ ಮಾಡುತ್ತಿರುವ ಸಾಹಿತ್ಯ ಮತ್ತು ಸಾಮಾಜಿಕ ಕೆಲಸಗಳನ್ನು ಮೆಚ್ಚಿಕೊಂಡರು. 

ವರ್ಷದ ಹಿಂದೆ ಗತಿಸಿದ ತಮ್ಮ ಪತ್ನಿ ಸುಗುಣಾಳ ನೆನಪಿಗೆ ಈ ಕೃತಿಯನ್ನು ಸಮರ್ಪಿಸಿದ ಲೇಖಕರು ಮಾರಾಟದಿಂದ ಬಂದ ಹಣವನ್ನು ವಿದ್ಯಾಪೋಷಕ್ ಗೆ ನೀಡುವುದಾಗಿ ಹೇಳಿದರು.

ಇದು ಈ ಲೇಖಕರ ಹತ್ತನೆಯ ಕೃತಿಯಾಗಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್, ಯು. ಹರಿಶ್ಚಂದ್ರ, ರವಿ .ಎಂ ಅಮೀನ್, ನಾರಾಯಣ ಎಂ. ಹೆಗಡೆ, ಡಾ. ವಿರೂಪಾಕ್ಷ ದೇವರುಮನೆ, ಎಚ್. ಎನ್. ವೆಂಕಟೇಶ್  ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments