ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ‘ದ್ಯೂತ ಪ್ರಕರಣ’ ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್ ರಾವ್ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ
ಅರ್ಥಧಾರಿಗಳಾಗಿ ಜಯರಾಮ ಬಲ್ಯ ( ಕೌರವ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ( ಕರ್ಣ )ಸತೀಶ್ ಆಚಾರ್ಯ ಮಾಣಿ (ಶಕುನಿ) ಶ್ರೀಮತಿ ಶ್ರುತಿ ವಿಸ್ಮಿತ(ವಿದುರ )ಶ್ರೀಧರ ಎಸ್.ಪಿ ಮಂಗಳೂರು (ಧರ್ಮರಾಯ)ದಿವಾಕರ ಆಚಾರ್ಯ ಗೇರುಕಟ್ಟೆ (ಧೃತರಾಷ್ಟ್ರ ಮತ್ತು ಭೀಮ) ಭಾಗವಹಿಸಿದ್ದರು.
ಗಣೇಶ್ ಆಚಾರ್ಯ. ಕೆ ಬೆಂಗಳೂರು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು
ನುಡಿನಮನ: ಇತ್ತೀಚೆಗೆ ನಿಧನರಾದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮತ್ತು ವೇಷಧಾರಿ ಗಂಗಾಧರ ಪುತ್ತೂರು ಇವರಿಗೆ ಸತೀಶ್ ಆಚಾರ್ಯ ಮಾಣಿ ಮತ್ತು ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ನುಡಿ ನಮನ ಸಲ್ಲಿಸಿದರು.
ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಜಯರಾಮ ಬಲ್ಯ, ದಿವಾಕರ ಆಚಾರ್ಯ ನೇರೆಂಕಿ ಮತ್ತು ಸಂಘದ ಕಲಾವಿದರು ಉಪಸ್ಥಿತರಿದ್ದರು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ