ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
ಉಡಪಿಯ ಯಕ್ಷಗಾನ ಕಲಾರಂಗ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ, ವಿದ್ವಾಂಸ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿದ್ದಾರೆ.

ಮಾರ್ಪಳ್ಳಿಯವರು ಯಕ್ಷಗಾನವಲ್ಲದೆ ನಾಟಕ, ಸಿನೇಮಾ, ಸಂಗೀತಾ, ಶಿಲ್ಪ, ಸಾಹಿತ್ಯ ಹೀಗೆ ಕಲೆಯ ಬಹು ಆಯಾಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಬಹುಮುಖೀ ಕಲಾಸಾಧಕರಾಗಿದ್ದಾರೆ.
ಪ್ರಶಸ್ತಿಯು ಪ್ರಶಸ್ತಿ ಪರಿಕರ ಸಹಿತ ರೂ. 40000/- ನಗದು ಪುರಸ್ಕಾರ ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮೇ 19 ಭಾನುವಾರ ಸಂಜೆ 5 ಗಂಟೆಗೆ ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಸ್ಥಾಪಕ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಅತಿಥಿ ಗಣ್ಯರ ಸಮಕ್ಷ ಜರಗಲಿದೆಯೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

