ಸೇರಾಜೆ ಸೀತಾರಾಮ ಮತ್ತು ಜಬ್ಬಾರ ಸಮೊ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ.

ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ
ಅನುಕ್ರಮವಾಗಿ ಅರ್ಥಧಾರಿ, ಹವ್ಯಾಸಿ ವೇಷಧಾರಿ ಜಬ್ಬಾರ ಸಮೊ ಹಾಗೂ ಅರ್ಥಧಾರಿ, ಹವ್ಯಾಸಿ ಕಲಾವಿದ, ಪ್ರಸಂಗಕರ್ತ, ಪ್ರವಚನಕಾರ ಸೇರಾಜೆ ಸೀತಾರಾಮ ಭಟ್ಟ ಆಯ್ಕೆಯಾಗಿದ್ದಾರೆ.
ಇದೇ ಜೂನ್ 23, ಭಾನುವಾರದಂದು ಅಪರಾಹ್ನ 3.00 ಗಂಟೆಗೆ ಸಂಸ್ಥೆಯ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರ್ನಲ್ಲಿ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ ಜರಗಲಿದೆ ಎಂಬುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

