ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.
ನಿನ್ನೆ (05.06.2024) ರಾತ್ರಿ ವೇಳೆಯಲ್ಲಿ ಮಾಡಾವು ಕಟ್ಟೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆಗಳು ಭೇಟಿ ನೀಡಿವೆ. ಬಾಳೆಯ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.
ಆನೆಯ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಇನ್ನೊಂದು ತೋಟದಲ್ಲಿ ಹಲಸಿನ ಹಣ್ಣುಗಳು ಧರಾಶಾಯಿಯಾಗಿದ್ದು ಆನೆಗಳು ಹಲಸಿನ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿವೆ. ಆನೆಗಳ ಲದ್ದಿಗಳು ಅನೇಕ ಕಡೆಗಳಲ್ಲಿ ಕಂಡುಬಂದಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
- 10 ತಿಂಗಳ ನಂತರ ಫರಿದಾಬಾದ್ನಲ್ಲಿ ಕೊಳೆತ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆ – ಯುವತಿಯ ತಂದೆ ಪೊಲೀಸರಿಗೆ ಇಮೇಲ್ ನಲ್ಲಿ ದೂರು ಕಳುಹಿಸಿದ ನಂತರ ಮನೆಯೊಳಗೆ ಹೂಳಲಾಗಿದ್ದ ಶವ ಪತ್ತೆ – ತಾಯಿಯ ಬಂಧನ
- ಹಿಂದಿನಿಂದ ಬೈಕ್ ಗುದ್ದಿ ವಿದ್ಯಾರ್ಥಿನಿಯ ದುರಂತ ಅಂತ್ಯ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ
- ಜಬ್ಬಾರ್ ಸಮೊ ಅವರಿಗೆ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ಪ್ರಶಸ್ತಿ, ಸೇರಾಜೆ ಸೀತಾರಾಮ ಭಟ್ ಅವರಿಗೆ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ಪ್ರಶಸ್ತಿ
- ಪುತ್ತೂರಿನಲ್ಲಿ ಪದ್ಯಾಣ ಸಂಸ್ಮರಣೆ – ಕುರಿಯ, ಪದ್ಯಾಣ ಪ್ರಶಸ್ತಿ ಪ್ರದಾನ, ತಾಳಮದ್ದಳೆ ಸಪ್ತಾಹ