
ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.
ನಿನ್ನೆ (05.06.2024) ರಾತ್ರಿ ವೇಳೆಯಲ್ಲಿ ಮಾಡಾವು ಕಟ್ಟೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆಗಳು ಭೇಟಿ ನೀಡಿವೆ. ಬಾಳೆಯ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

ಆನೆಯ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಇನ್ನೊಂದು ತೋಟದಲ್ಲಿ ಹಲಸಿನ ಹಣ್ಣುಗಳು ಧರಾಶಾಯಿಯಾಗಿದ್ದು ಆನೆಗಳು ಹಲಸಿನ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿವೆ. ಆನೆಗಳ ಲದ್ದಿಗಳು ಅನೇಕ ಕಡೆಗಳಲ್ಲಿ ಕಂಡುಬಂದಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

