
ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.
ನಿನ್ನೆ (05.06.2024) ರಾತ್ರಿ ವೇಳೆಯಲ್ಲಿ ಮಾಡಾವು ಕಟ್ಟೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆಗಳು ಭೇಟಿ ನೀಡಿವೆ. ಬಾಳೆಯ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

ಆನೆಯ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಇನ್ನೊಂದು ತೋಟದಲ್ಲಿ ಹಲಸಿನ ಹಣ್ಣುಗಳು ಧರಾಶಾಯಿಯಾಗಿದ್ದು ಆನೆಗಳು ಹಲಸಿನ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿವೆ. ಆನೆಗಳ ಲದ್ದಿಗಳು ಅನೇಕ ಕಡೆಗಳಲ್ಲಿ ಕಂಡುಬಂದಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ

