ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ
ಯಕ್ಷಶಿಕ್ಷಣ ಟ್ರಸ್ಟ್( ರಿ) ಉಡುಪಿ ಕಳೆದ 17 ವರ್ಷಗಳಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದು, ಈ ವರ್ಷ ಶಾಸಕರಾದ ಗುರುರಾಜ ಗಂಟಿಹೊಳೆಯವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ 11 ಶಾಲೆಗಳು ಸೇರಿ ಒಟ್ಟೂ 91 ಶಾಲೆಗಳಲ್ಲಿ ಯಕ್ಷಶಿಕ್ಷಣ ನಡೆಸಲು ಯೋಜಿಸಿದೆ.
ಈ ಪ್ರಯುಕ್ತ ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ 12.06.2024 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದ ಹೊರಾಂಗಣದಲ್ಲಿ ಜರಗಿತು.
ಉಡುಪಿ ಕ್ಷೇತ್ರದ ಶಾಸಕ, ಟ್ರಸ್ಟ್ ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾತನಾಡಿ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯನಿರ್ವಹಣೆಯಲ್ಲಿ ಕಲಾರಂಗದ ಕಾರ್ಯಕರ್ತರ ದುಡಿಮೆ ದೊಡ್ಡದು, ನಾವೆಲ್ಲ ಒಟ್ಟಾಗಿ ಈ ಮಹಾಭಿಯನವನ್ನು ಯಶಸ್ವಿಯಾಗಿಸೋಣ ಎಂದರು.
ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ ಮಕ್ಕಳಿಗೆ ಸಂಸ್ಕಾರ ನೀಡುವ ಈ ಕಲಾಪ್ರಕಾರ ಉಳಿಸಿ ಬೆಳೆಸುವಲ್ಲಿ ಯಕ್ಷ ಗುರುಗಳ ಕೊಡುಗೆ ಮಹತ್ತ್ವದ್ದು ಎಂದು ಅಭಿಪ್ರಾಯ ಪಟ್ಟರು.
ಹಿರಿಯ ಟ್ರಸ್ಟಿ ಎಸ್. ವಿ. ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಕೋಶಾಧಿಕಾರಿ ಎಚ್. ಎನ್ ಶೃಂಗೇಶ್ವರ, ಟ್ರಸ್ಟಿಗಳಾದ ವಿ. ಜಿ. ಶೆಟ್ಟಿ, ನಾರಾಯಣ ಎಂ. ಹೆಗಡೆ, ಮೀನಾಲಕ್ಷಣ ಅಡ್ಯಂತಾಯ, ಗಣೇಶ್ ಬ್ರಹ್ಮಾವರ, ನಾಗರಾಜ ಹೆಗಡೆ ಉಪಸ್ಥಿತರಿದ್ದರು.
40 ಕಲಾವಿದರು ಗುರುಗಳಾಗಿ ಸೇವೆ ಸಲ್ಲಿಸಲಿರುವರು. ಗುರುಗಳಿಗೆ ಶಾಲೆಗಳನ್ನು ಹಂಚಿಕೆಮಾಡಿ ಅಗತ್ಯ ಸೂಚನೆ ನೀಡಲಾಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

