Tuesday, July 9, 2024
Homeಸುದ್ದಿಉಚಿತ ಆಯುರ್ವೇದ ವೈದ್ಯಕೀಯ ಶಿಬಿರ

ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಜುಲೈ 7ನೇ ತಾರೀಕು ಆದಿತ್ಯವಾರ ಮಧ್ಯಾಹ್ನ 2:30 ರಿಂದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಪೆರ್ಲ ಇವರ ಸಹಭಾಗಿತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನಡೆಯಲಿದೆ.

ಶಿಬಿರವು ಶ್ರೀ ಗೋಪಾಲಕೃಷ್ಣ ಫಾರ್ಮಸಿ ಕುಂಬಳೆ, ಡಾ. ರವಿ ನಾರಾಯಣ ,ಸಂಜೀವಿನಿ ಕ್ಲಿನಿಕ್ ಪುತ್ತೂರು, ಶ್ರೀ ಸದ್ಗುರು ಡಿಸ್ಟ್ರಿಬ್ಯೂಟರ್ಸ್ ಕಬಕ ,ಸಿ ಕೆಮ್ ಫಾರ್ಮ್ ಸಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ನಡೆಯಲಿದೆ.

ಪ್ರಸಿದ್ಧ ವೈದ್ಯರಾದ ಡಾ. ಕೃಷ್ಣ ಮೋಹನ ಬಿ. ಆರ್. ಚಿನ್ಮಯ ಕ್ಲಿನಿಕ್ ಪೆರ್ಲ, ಡಾ. ಸತ್ಯನಾರಾಯಣ ಬಿ. ಪ್ರಶಾಂತಿ ಕ್ಲಿನಿಕ್ ಬಾಯಾರು ಶಿಬಿರವನ್ನು ನಡೆಸಿಕೊಡಲಿರುವರು.

ಅಧ್ಯಯನ ಯೋಗ್ಯ ಸಾಂಸ್ಕೃತಿಕ ಚಟುವಟಿಕೆಗಳ ಜೊತೆ ಪ್ರತಿಷ್ಠಾನ ಉಚಿತ ಆಯುರ್ವೇದ ಶಿಬಿರ ಹಾಗೂ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉಪಯುಕ್ತವಾಗುವ ಇನ್ನಿತರ ಶಿಬಿರಗಳನ್ನು ನಡೆಸಲಿದೆ ಎಂದು ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments