ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪ.ಪೂ ಕಾಲೇಜುಗಳಿಗೆ ಇಂದು, ದಿನಾಂಕ ಜುಲೈ 15 ಸೋಮವಾರ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಣೆ ಮಾಡಿ ಆದೇಶ ನೀಡಿದರು.
ಇಂದು ದಿನಾಂಕ 15.07 2024ರ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯ ಸಂಭಾವ್ಯತೆ ಇರುವುದರಿಂದ ಹಾಗೂ ಸಂಭಾವ್ಯ ಭೂಕುಸಿತಗಳನ್ನು ಗಮನದಲ್ಲಿಟ್ಟುಕೊಂಡು ಈ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿಯ ಪ್ರಕಟಣೆಯಿಂದ ತಿಳಿದುಬಂದಿದೆ.