
ಯಕ್ಷಗಾನ ಪ್ರಿಯರಿಗೆ ಒಂದು ಅಪೂರ್ವ ಅವಕಾಶ. ಸತತ ಏಳು ದಿನಗಳ ಕಾಲ ಯಕ್ಷಗಾನ ಪ್ರದರ್ಶನಗಳನ್ನು ಸವಿಯುವ ಭಾಗ್ಯ.
ಹೌದು. ಇದು ನಿಜ. ದಿನಾಂಕ 22.07. 2024 ರಿಂದ 28.07.2024ರ ವರೆಗೆ ಸಂಪೂರ್ಣ ಶ್ರೀ ರಾಮಾಯಣ ದರ್ಶನಂ ಎಂಬ ಪುಣ್ಯ ಕಥಾಭಾಗದ ಯಕ್ಷಗಾನ ಬಯಲಾಟ ಏಳು ದಿನಗಳಲ್ಲಿ ನಡೆಯಲಿದೆ.
ಶ್ರೀ ರಾಮ ಕ್ಷೇತ್ರ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಪ್ರಯುಕ್ತ ರಾಮಾಯಣದ ಏಳು ಕಾಂಡದ ಯಕ್ಷಗಾನ ಪ್ರದರ್ಶನಗಳು ಈ ಏಳು ದಿನಗಳಲ್ಲಿ ನಡೆಯಲಿದೆ.
ಪ್ರಸಿದ್ಧ ಕಲಾವಿದರ ಗಡಣದಿಂದಲೇ ಪ್ರದರ್ಶಿಸಲ್ಪಡುವ ಈ ಏಳು ದಿನಗಳ ಯಕ್ಷಗಾನ ಬಯಲಾಟದಲ್ಲಿ ಪಾತ್ರಧಾರಿಗಳ ವಿವರ ಮತ್ತು ಪ್ರಸಂಗದ ವಿವರಗಳಿಗೆ ಮೇಲಿನ ಚಿತ್ರವನ್ನು ನೋಡಬಹುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

