
ಪುತ್ತಿಗೆ ರಘುರಾಮ ಹೊಳ್ಳರಿಗೆ ಅಗರಿ ಪ್ರಶಸ್ತಿ ಮತ್ತು ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ
ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಪ್ರಶಸ್ತಿ ಹಾಗು ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜುಲೈ 28ರಂದು ಜರಗಿತು.
ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವೀಕರಿಸಿದರು.
ಕಟೀಲು ಕ್ಷೇತ್ರದ ಹರಿನಾರಾಯಣ ದಾಸ ಅಸ್ರಣ್ಣರು, ಶ್ರೀಪತಿ ಭಟ್, ಅಗರಿ ರಾಘವೇಂದ್ರ ರಾವ್, ಸುಮಂಗಲ ರತ್ನಾಕರ್, ವಾದಿರಾಜ ಕಲ್ಲುರಾಯ, ಕೃಷ್ಣಪ್ರಕಾಶ್ ಉಳಿತ್ತಾಯ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

