ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕ್ರಿಯಾಕರ್ತೃ ಗೋಪಾಲಕೃಷ್ಣ ಭಟ್ (ಅಪ್ಪಚ್ಚಿ) ನಿಧನ ಹೊಂದಿದ್ದಾರೆ.
ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆಯ ಕ್ರಿಯಾಕರ್ತೃವಾಗಿ ಸೇವೆ ಸಲ್ಲಿಸುತ್ತಿದ್ದರು.
ನಿನ್ನೆ (19.08.2024) ದೇವಾಲಯದಲ್ಲಿ ತನ್ನ ಕರ್ತವ್ಯವನ್ನು ಪೂರೈಸಿದ್ದ ಅವರು ರಾತ್ರಿ ಎಂದಿನಂತೆ ಮಲಗಿದ್ದರು. ಆದರೆ ದುರದೃಷ್ಟವಶಾತ್ ಅವರು ಸುಮಾರು ಮಧ್ಯರಾತ್ರಿಯ ಹೊತ್ತಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಸುಬ್ರಹ್ಮಣ್ಯದಲ್ಲಿಯೇ ವಾಸ್ತವ್ಯವಿದ್ದ ಅವರನ್ನು ಇಂದು (20.08.2024) ಮುಂಜಾನೆ ಸಹೋದ್ಯೋಗಿಗಳು ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮೃತಪಟ್ಟಿರುವುದು ಅರಿವಿಗೆ ಬಂತು ಎಂದು ತಿಳಿದುಬಂದಿದೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ಸಮೀಪದ ನಿವಾಸಿಯಾಗಿದ್ದ ಅವರು ಸಹೋದ್ಯೋಗೀ ವಲಯದಲ್ಲಿ ಅಪ್ಪಚ್ಚಿ ಎಂದೇ ಗುರುತಿಸಲ್ಪಡುತ್ತಿದ್ದರು.
ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ