ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕ್ರಿಯಾಕರ್ತೃ ಗೋಪಾಲಕೃಷ್ಣ ಭಟ್ (ಅಪ್ಪಚ್ಚಿ) ನಿಧನ ಹೊಂದಿದ್ದಾರೆ.
ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆಯ ಕ್ರಿಯಾಕರ್ತೃವಾಗಿ ಸೇವೆ ಸಲ್ಲಿಸುತ್ತಿದ್ದರು.
ನಿನ್ನೆ (19.08.2024) ದೇವಾಲಯದಲ್ಲಿ ತನ್ನ ಕರ್ತವ್ಯವನ್ನು ಪೂರೈಸಿದ್ದ ಅವರು ರಾತ್ರಿ ಎಂದಿನಂತೆ ಮಲಗಿದ್ದರು. ಆದರೆ ದುರದೃಷ್ಟವಶಾತ್ ಅವರು ಸುಮಾರು ಮಧ್ಯರಾತ್ರಿಯ ಹೊತ್ತಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಸುಬ್ರಹ್ಮಣ್ಯದಲ್ಲಿಯೇ ವಾಸ್ತವ್ಯವಿದ್ದ ಅವರನ್ನು ಇಂದು (20.08.2024) ಮುಂಜಾನೆ ಸಹೋದ್ಯೋಗಿಗಳು ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮೃತಪಟ್ಟಿರುವುದು ಅರಿವಿಗೆ ಬಂತು ಎಂದು ತಿಳಿದುಬಂದಿದೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ಸಮೀಪದ ನಿವಾಸಿಯಾಗಿದ್ದ ಅವರು ಸಹೋದ್ಯೋಗೀ ವಲಯದಲ್ಲಿ ಅಪ್ಪಚ್ಚಿ ಎಂದೇ ಗುರುತಿಸಲ್ಪಡುತ್ತಿದ್ದರು.
ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

