‘ರಕ್ಷಾಬಂಧನ’ ಇದು ಭಾತೃತ್ವದ ಸಂದೇಶ ಸಾರುವ ಹಬ್ಬ ಈ ಸಂಭ್ರಮದ ಹಬ್ಬವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ದಿನಾಂಕ 20-08-2024 ರಂದು ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಾಗ್ಮಿ ಬಿ.ಗಣರಾಜ ಭಟ್ ಕೆದಿಲ, ಇವರು ಆಗಮಿಸಿದ್ದರು. ಭಾರತಮಾತೆಗೆ ಪುಷ್ಪಾರ್ಚನೆ ಗೈದು ರಕ್ಷೆಯನ್ನು ಕಟ್ಟಿ, ರಕ್ಷೆಯ ಮಹತ್ವ, ಮತ್ತು ರಕ್ಷಾ ಬಂಧನದ ಮಹತ್ವ ಅದರ ವಿಶೇಷತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ನುಡಿಗಳೊಂದಿಗೆ ಶುಭ ಹಾರೈಸಿದರು.
ಶಾಲಾ ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಭಾಸ್ಕರ್ ಗೌಡ ಉಪಸ್ಥಿತರಿದ್ದರು.
ನಾವೆಲ್ಲ ಹಿಂದು, ನಾವೆಲ್ಲ ಬಂಧು ನಾವೆಲ್ಲ ಒಂದು’ ಎಂಬ ನಮ್ಮೆಲ್ಲರನ್ನು ಬೆಸೆಯುವ ಸಹೋದರತ್ವ ಪ್ರತೀಕವಾಗಿರುವ ರಕ್ಷೆಯನ್ನು ವಿದ್ಯಾರ್ಥಿಗಳೆಲ್ಲರೂ ಪರಸ್ಪರ ಕಟ್ಟಿಕೊಂಡು ಸಂಭ್ರಮಿಸಿದರು.
ಶಿಕ್ಷಕಿ ಸವಿತಾ ರಕ್ಷಾಬಂಧನಾದ ಸಂದೇಶ ವಾಚಿಸಿದರು. ಕು.ಸುಪ್ರಜಾ ರಾವ್ ವೈಯಕ್ತಿಕ ಗೀತೆ ಹಾಡಿದರು. ಶಿಕ್ಷಕಿ ಕು.ಸ್ವಾತಿ ಕಾಮತ್ ಅತಿಥಿಗಳನ್ನು ಸ್ವಾಗತಿಸಿ,
ಶ್ರೀ ವೆಂಕಟೇಶ್ ಪ್ರಸಾದ್ ಧನ್ಯವಾದಗೈದರು. ಶ್ರೀಮತಿ ಶಿವಾನಿ ಗಣಪತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಾಲೆಯ ಶಿಕ್ಷಕ ಶಿಕ್ಷಕೇತರ ಬಂಧುಗಳು ಸಹಕರಿಸಿದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ