Friday, September 20, 2024
Homeಸುದ್ದಿ‘ರಕ್ಷಾಬಂಧನ’

‘ರಕ್ಷಾಬಂಧನ’


‘ರಕ್ಷಾಬಂಧನ’ ಇದು ಭಾತೃತ್ವದ ಸಂದೇಶ ಸಾರುವ ಹಬ್ಬ ಈ ಸಂಭ್ರಮದ ಹಬ್ಬವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ದಿನಾಂಕ 20-08-2024 ರಂದು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಾಗ್ಮಿ ಬಿ.ಗಣರಾಜ ಭಟ್ ಕೆದಿಲ, ಇವರು ಆಗಮಿಸಿದ್ದರು. ಭಾರತಮಾತೆಗೆ ಪುಷ್ಪಾರ್ಚನೆ ಗೈದು ರಕ್ಷೆಯನ್ನು ಕಟ್ಟಿ, ರಕ್ಷೆಯ ಮಹತ್ವ, ಮತ್ತು ರಕ್ಷಾ ಬಂಧನದ ಮಹತ್ವ ಅದರ ವಿಶೇಷತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ನುಡಿಗಳೊಂದಿಗೆ ಶುಭ ಹಾರೈಸಿದರು.

ಶಾಲಾ ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಭಾಸ್ಕರ್ ಗೌಡ ಉಪಸ್ಥಿತರಿದ್ದರು.

ನಾವೆಲ್ಲ ಹಿಂದು, ನಾವೆಲ್ಲ ಬಂಧು ನಾವೆಲ್ಲ ಒಂದು’ ಎಂಬ ನಮ್ಮೆಲ್ಲರನ್ನು ಬೆಸೆಯುವ ಸಹೋದರತ್ವ ಪ್ರತೀಕವಾಗಿರುವ ರಕ್ಷೆಯನ್ನು ವಿದ್ಯಾರ್ಥಿಗಳೆಲ್ಲರೂ ಪರಸ್ಪರ ಕಟ್ಟಿಕೊಂಡು ಸಂಭ್ರಮಿಸಿದರು.

ಶಿಕ್ಷಕಿ ಸವಿತಾ ರಕ್ಷಾಬಂಧನಾದ ಸಂದೇಶ ವಾಚಿಸಿದರು. ಕು.ಸುಪ್ರಜಾ ರಾವ್ ವೈಯಕ್ತಿಕ ಗೀತೆ ಹಾಡಿದರು. ಶಿಕ್ಷಕಿ ಕು.ಸ್ವಾತಿ ಕಾಮತ್ ಅತಿಥಿಗಳನ್ನು ಸ್ವಾಗತಿಸಿ,

ಶ್ರೀ ವೆಂಕಟೇಶ್ ಪ್ರಸಾದ್ ಧನ್ಯವಾದಗೈದರು. ಶ್ರೀಮತಿ ಶಿವಾನಿ ಗಣಪತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಾಲೆಯ ಶಿಕ್ಷಕ ಶಿಕ್ಷಕೇತರ ಬಂಧುಗಳು ಸಹಕರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments