‘ರಕ್ಷಾಬಂಧನ’ ಇದು ಭಾತೃತ್ವದ ಸಂದೇಶ ಸಾರುವ ಹಬ್ಬ ಈ ಸಂಭ್ರಮದ ಹಬ್ಬವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ದಿನಾಂಕ 20-08-2024 ರಂದು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಾಗ್ಮಿ ಬಿ.ಗಣರಾಜ ಭಟ್ ಕೆದಿಲ, ಇವರು ಆಗಮಿಸಿದ್ದರು. ಭಾರತಮಾತೆಗೆ ಪುಷ್ಪಾರ್ಚನೆ ಗೈದು ರಕ್ಷೆಯನ್ನು ಕಟ್ಟಿ, ರಕ್ಷೆಯ ಮಹತ್ವ, ಮತ್ತು ರಕ್ಷಾ ಬಂಧನದ ಮಹತ್ವ ಅದರ ವಿಶೇಷತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ನುಡಿಗಳೊಂದಿಗೆ ಶುಭ ಹಾರೈಸಿದರು.


ಶಾಲಾ ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಭಾಸ್ಕರ್ ಗೌಡ ಉಪಸ್ಥಿತರಿದ್ದರು.
ನಾವೆಲ್ಲ ಹಿಂದು, ನಾವೆಲ್ಲ ಬಂಧು ನಾವೆಲ್ಲ ಒಂದು’ ಎಂಬ ನಮ್ಮೆಲ್ಲರನ್ನು ಬೆಸೆಯುವ ಸಹೋದರತ್ವ ಪ್ರತೀಕವಾಗಿರುವ ರಕ್ಷೆಯನ್ನು ವಿದ್ಯಾರ್ಥಿಗಳೆಲ್ಲರೂ ಪರಸ್ಪರ ಕಟ್ಟಿಕೊಂಡು ಸಂಭ್ರಮಿಸಿದರು.
ಶಿಕ್ಷಕಿ ಸವಿತಾ ರಕ್ಷಾಬಂಧನಾದ ಸಂದೇಶ ವಾಚಿಸಿದರು. ಕು.ಸುಪ್ರಜಾ ರಾವ್ ವೈಯಕ್ತಿಕ ಗೀತೆ ಹಾಡಿದರು. ಶಿಕ್ಷಕಿ ಕು.ಸ್ವಾತಿ ಕಾಮತ್ ಅತಿಥಿಗಳನ್ನು ಸ್ವಾಗತಿಸಿ,
ಶ್ರೀ ವೆಂಕಟೇಶ್ ಪ್ರಸಾದ್ ಧನ್ಯವಾದಗೈದರು. ಶ್ರೀಮತಿ ಶಿವಾನಿ ಗಣಪತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಾಲೆಯ ಶಿಕ್ಷಕ ಶಿಕ್ಷಕೇತರ ಬಂಧುಗಳು ಸಹಕರಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

