ಎಂಭತ್ತರ ಸಂಭ್ರಮದಲ್ಲಿರುವ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಸಂಸ್ಥಾಪಕಧ್ಯಕ್ಷರು, ಯಕ್ಷಗಾನ ಗುರುಕುಲದ ರೂವಾರಿ ಕವಿ, ಅರ್ಥಧಾರಿ, ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣೆಯೊಂದಿಗೆ ನೀಡಲಾಗುತ್ತಿರುವ 2024 ರ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಗೆ ವಿದ್ವಾನ್ ಕೆರೆಕೈ ಉಮಾಕಾಂತ ಭಟ್ಟರ ಹೆಸರನ್ನು ಘೋಷಿಸಲಾಗಿದೆ.
ವಿದ್ವಾನ್ ಉಮಾಕಾಂತ ಭಟ್ಟರು ಖ್ಯಾತ ಯಕ್ಷಗಾನ ಅರ್ಥಧಾರಿಯಾಗಿ, ಪ್ರವಚನಕಾರರಾಗಿ, ಉಪನ್ಯಾಸಕರಾಗಿ, ಕವಿಯಾಗಿ ನಾಡಿನ ಉದ್ದಗಲಗಳಲ್ಲೂ ಪ್ರಸಿದ್ಧರಾದವರು.
ನ್ಯಾಯಶಾಸ್ತ್ರ ಪಂಡಿತರಾಗಿ, ಪ್ರಾಚಾರ್ಯರಾಗಿ ಮೇಲುಕೋಟೆಯ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿದ ಉಮಾಕಾಂತ ಭಟ್ಟರು ಬಹುಮಾನ್ಯರು ಮತ್ತು ಬಹುಶ್ರುತ ವಿದ್ವಾಂಸರು.
ಆಗಸ್ಟ್ 31ರಂದು ದಿನಪೂರ್ತಿ ನಡೆಯಲಿರುವ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಎಂಭತ್ತರ ಸಂಭ್ರಮದ ಕಲೋತ್ಸವದಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ, ಸನ್ಮಾನ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಗೌರವ ಉಪಸ್ಥಿತಿಯೊಂದಿಗೆ
ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಡುವೆ ಕೀರಿಕ್ಕಾಡು ಪ್ರಶಸ್ತಿಯನ್ನು ವಿದ್ವಾನ್ ಉಮಾಕಾಂತ ಭಟ್ಟರಿಗೆ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಪ್ರಕಟಣೆ ತಿಳಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

