ಕುರಿಯ ವಿಠಲ ಶಾಸ್ತ್ರಿಗಳ ಸಹೋದರನ ಮಗ, ಭಾಗವತ ಕುರಿಯ ಗಣಪತಿ ಶಾಸ್ತಿçಗಳ ಕಿರಿಯ ಸಹೋದರ ಕುರಿಯ ಗೋಪಾಲಕೃಷ್ಣ ಭಟ್ ನಿನ್ನೆ (21.08.24) ನಿಧನ ಹೊಂದಿದರು.
ಕುರಿಯ ಮೂಲ ಮನೆಯ ಸಮೀಪಲ್ಲಿದ್ದು ಮನೆಯ ವ್ಯವಹಾರ ನೋಡಿಕೊಳ್ಳುತ್ತಿದ್ದ ಇವರು ಅಣ್ಣ ಗಣಪತಿ ಶಾಸ್ತ್ರಿಗಳ ಕಲಾಬದುಕಿಗೆ ಯಾವುದೇ ತೊಡಕಾಗದಂತೆ ಅವರನ್ನು ಚೆನ್ನಾಗಿ ನೋಡಿಕೊಂಡು ಬಂದಿದ್ದರು.
ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢಶಾಲೆಯಲ್ಲಿ ಕಛೇರಿ ಅಧೀಕ್ಷಕರಾಗಿದ್ದ ಇವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ದೊಡ್ಡ ಕಲಾಮನೆತನದಲ್ಲಿ ಜನಿಸಿದ, ಸಹೃದಯಿ ಕಲಾಪೋಷಕರಾಗಿದ್ದ ಇವರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

