‘ಯಕ್ಷದೀಪ’ ಆನ್ ಲೈನ್ ಸುದ್ದಿ ಜಾಲತಾಣವು ಯಶಸ್ವಿ ಐದನೇ ವರ್ಷಕ್ಕೆ ಪದಾರ್ಪಣೆಗೊಂಡಿದೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ.
ಕೊರೊನಾ ಸಂದರ್ಭದಲ್ಲಿ ಬಂದ ಆರ್ಥಿಕ ಸಂಕಷ್ಟ ನಮ್ಮನ್ನು ಅನಿವಾರ್ಯವಾಗಿ ಪ್ರಿಂಟಿಂಗ್ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮಕ್ಕೆ ದೂಡಿತು.
ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರು ನಮ್ಮನ್ನು ಕೈಹಿಡಿದು ಪ್ರೋತ್ಸಾಹಿಸಿದರು. ಅವರಿಗೆ ಎಲ್ಲರಿಗೂ ಯಾವಾಗಲೂ ಕೃತಜ್ಞತೆಯ ಭಾವವನ್ನು ಹೊಂದಿರುತ್ತೇವೆ.
ಆದರೂ ಕೆಲವು ಮಂದಿ ಆ ಕಷ್ಟದ ಸನ್ನಿವೇಶದಲ್ಲಿ ಬೆನ್ನ ಹಿಂದೆ ಕುಹಕವಾಡಿದರು. ಆ ನೋವು ಹಾಗೆಯೇ ಉಳಿದಿದೆ. ಇನ್ನು ಕೆಲವರು ಈಗ ತಾವೂ ಡಿಜಿಟಲ್ ಮಾಧ್ಯಮಕ್ಕೆ ಮೊರೆಹೋಗಿದ್ದಾರೆ.
ಏನೇ ಇದ್ದರೂ ಓದುಗರ ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತಾ ಮುಂದುವರಿಯಲು ಸಹೃದಯಿ ಓದುಗರ ಪ್ರೋತ್ಸಾಹವನ್ನು ಸದಾ ಆಶಿಸುತ್ತೇವೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

