ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 66ನೇ ವಾರ್ಷಿಕ ಮಹಾಸಭೆ ಕೆ. ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16, 2024ರಂದು ಜರಗಿತು.
ಪ್ರಕಾಶ್ ಹೆಬ್ಬಾರ್ ಗತಸಭೆ ವರದಿ ಮಂಡಿಸಿದರು. ಎ. ನಟರಾಜ ಉಪಾಧ್ಯರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ್ ಹೆಬ್ಬಾರ್ರನ್ನು ಲೆಕ್ಕಪರಿಶೋಧಕರಾಗಿ ನಿಯುಕ್ತಿಗೊಳಿಸಲಾಯಿತು.
2024-25ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು.
ಅಧ್ಯಕ್ಷ : ಕೆ. ಅಜಿತ್ ಕುಮಾರ್, ಉಪಾಧ್ಯಕ್ಷ : ಕೆ. ಜೆ. ಗಣೇಶ್, ಕಾರ್ಯದರ್ಶಿ : ಪ್ರಕಾಶ ಹೆಬ್ಬಾರ್, ಜತೆಕಾರ್ಯದರ್ಶಿ : ನಚಿಕೇತ, ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ, ಗೌರವ ಸಲಹೆಗಾರ : ಎ. ರಾಘವೇಂದ್ರ ಉಪಾಧ್ಯ.
ಕಾರ್ಯಕಾರಿ ಸಮಿತಿ ಸದಸ್ಯರು : ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಎ. ಪ್ರವೀಣ್ ಉಪಾಧ್ಯ, ಕೆ. ಜೆ. ಕೃಷ್ಣ, ಮಂಜುನಾಥ ತೆಂಕಿಲ್ಲಾಯ, ವಸಂತ ಪಾಲನ್, ಸುನಿಲ್ ಕುಮಾರ್, ಕೆ. ಜೆ. ಸುಧೀಂದ್ರ, ರಮೇಶ ಸಾಲಿಯಾನ್, ಜಯ ಕೆ.
ವಿಶೇಷ ಆಹ್ವಾನಿತರು : ಎಸ್. ವಿ. ಭಟ್, ವಿಜಯ್ಕುಮಾರ್, ವಿದ್ಯಾಪ್ರಸಾದ್, ಮಾಧವ ಕೆ., ಪ್ರಶಾಂತ್ ಕೆ. ಎಸ್., ಅರವಿಂದ ಆಚಾರ್ಯ, ದೀಪ್ತ ಆಚಾರ್ಯ, ಎ. ಸತ್ಯಜಿತ್ ಉಪಾಧ್ಯ, ರಮ್ಯ ಮಲ್ಪೆ, ವಾರಿಜ ಮಲ್ಪೆ, ವಾಗೀಶ ರಾವ್.
ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಧನ್ಯವಾದ ಸಮರ್ಪಿಸಿದರು.
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES