ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ (83) 21.09.2024ರಂದು ನಿಧನ ಹೊಂದಿದರು.
ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು.
ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಡ ಇವರ ಯಕ್ಷಪಯಣ, ಮುಂದೆ ಹವ್ಯಾಸಿ ಸಂಘ ಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು.
ಅವರು ಪತ್ನಿ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು.
ವಸಂತ ಶೆಟ್ಟಿಯವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

