ಕೋಲಾರ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಸಾವನ್ನಪ್ಪಿದ ಯುವತಿ. ಇದು ನಡೆದದ್ದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ.
ಕೋಲಾರದ ಶ್ರೇಯ ಆಸ್ಪತ್ರೆಯಲ್ಲಿ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದ ದೀಪ್ತಿ (22) ಮೃತಪಟ್ಟ ಯುವತಿ. ಕಿಡ್ನಿ ಸ್ಟೋನ್ ಕಾರಣ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಕಿಡ್ನಿ ಸ್ಟೋನ್ ಕಾರಣ ಯುವತಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಆಪರೇಶನ್ ಮಾಡುವುದಾಗಿ ವೈದ್ಯರು ತಿಳಿಸಿದ್ದರು.
ಆದರೆ ವೈದ್ಯರು ಸಂಜೆ 5 ಗಂಟೆ ಸುಮಾರಿನಲ್ಲಿ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಹೆತ್ತವರಿಗೆ ತಿಳಿಸಿದ್ದಾರೆ.
ಆಸ್ಪತ್ರೆಯ ಡಾಕ್ಟರ್ ವಿರುದ್ಧ ಪೋಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ದೀಪ್ತಿಯ ಸಾವಿಗೆ ಕಾರಣ ಎಂದಿದ್ದಾರೆ. ಡಾಕ್ಟರ್ ನೀಡಿದ್ದ ಅನಸ್ತೇಶಿಯಾ ಡೋಸ್ ಹೆಚ್ಚಾಗಿ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

