ರಾಜರ್ಷಿ, ಪದ್ಮವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದ ಹಾಗು ತೆಂಕು ತಿಟ್ಟು ಯಕ್ಷಗಾನದ ಬೃಹತ್ ಮ್ಯೂಸಿಯಂ ನ ಯೋಜನೆಯನ್ನು ಮೆಚ್ಚಿ.ಆರಂಭದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಕ್ಕೆ 10 ಲಕ್ಷ ರೂಪಾಯಿಗಳನ್ನು ನೀಡಿದ್ದರು
ಇದೀಗ ಪುನಃ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಪ್ರಸಾದ ರೂಪವಾಗಿ 15 ಲಕ್ಷ ರೂಪಾಯಿಗಳ ಧನಸಹಾಯ ನೀಡಿ ಹರಸಿರುತ್ತಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಸಾಂಸ್ಕೃತಿಕ ಭವನ, ಮ್ಯೂಸಿಯಂ ಲೋಕಾರ್ಪಣೆಗೊಳಿಸಿದ ಪೂಜ್ಯ ಖಾವಂದರು, ಯಕ್ಷಗಾನ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಅಧ್ಯಯನಕ್ಕೆ ಇದೊಂದು ದೊಡ್ಡ ಕೊಡುಗೆಯಾಗಲಿದೆ ಎಂದು ಶುಭ ಹಾರೈಸಿದ್ದರು.
ಇತ್ತೀಚೆಗೆ ಶ್ರೀ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮೇಳದ ಯಜಮಾನರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಭೇಟಿ ನೀಡಿ ಇದೊಂದು ಕಲಾ ವಲಯದ ಅದ್ಬತ ಎಂದಿದ್ದರು.
ಪ್ರತಿಷ್ಠಾನದ ಅದ್ಯಕ್ಷ, ಶ್ರೀ ಧರ್ಮಸ್ಥಳ ಮೇಳದ ಪ್ರಧಾನ ಭಾಗವತ ಶ್ರೀ ರಾಮಕೃಷ್ಣ ಮಯ್ಯ ಅವರು ಪೂಜ್ಯರು ನೀಡಿದ ಆರ್ಥಿಕ ಸಹಕಾರವನ್ನು ಸ್ವೀಕರಿಸಿದರು.
ಪ್ರತಿಷ್ಠಾನದ ಕಾರ್ಯಕರ್ತರಾದ ಶ್ರೀ ಪ್ರಸನ್ನ ಕಾರಂತ ದೇಶಮಂಗಲ, ಶ್ರೀ ಶ್ರೀಮುಖ ಮಯ್ಯ, ಸಿರಿಬಾಗಿಲು ಜತೆಗಿದ್ದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

